Ad imageAd image

MLC ರಾಜೇಂದ್ರ ಕೊಲೆಗೆ ಸಂಚು: 3 ಮಂದಿ ಪೊಲೀಸರ  ವಶಕ್ಕೆ

SD Editor
1 Min Read

ಸತ್ಯದರ್ಶಿನಿ ಸುದ್ದಿ ತುಮಕೂರು: ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರ ಪುತ್ರ, ಎಂಎಲ್‌ಸಿ ರಾಜೇಂದ್ರ ರಾಜಣ್ಣ ಕೊಲೆಗೆ ಸಂಚು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಯಾತ್ಸಂದ್ರ ಪೊಲೀಸ್ ಠಾಣೆಯಲ್ಲಿ ಐವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಸೋಮ, ಭರತ್, ಅಮಿತ್, ಗುಂಡ, ಯತೀಶ್ ಎಂಬುವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಪೈಕಿ ಮೂವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿರುವ ಬಗ್ಗೆ ತಿಳಿದು ಬಂದಿದೆ.

2024 ನವೆಂಬರ್ ತಿಂಗಳಿನಲ್ಲಿ ನನ್ನ ಕೊಲೆಗೆ ಸುಪಾರಿ ನೀಡಲಾಗಿತ್ತು. 5 ಲಕ್ಷಕ್ಕೆ ಸುಪಾರಿ ಪಡೆದು ಕೊಲೆಗೆ ದುಷ್ಕರ್ಮಿಗಳು ಯತ್ನಿಸಿದ್ದರು ಎಂದು ಆರೋಪಿಸಿ ಎಂಎಲ್‌ಸಿ ರಾಜೇಂದ್ರ ಅವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ.

ಅನಾಮಧೇಯ ಮೂಲಗಳಿಂದ ಸಿಕ್ಕ ಆಡಿಯೊದಲ್ಲಿ ರಾಜೇಂದ್ರ ಕೊಲೆಗೆ ಸುಪಾರಿ ಬಗ್ಗೆ ಮಾತುಕತೆ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. ಆರೋಪಿಗಳಾದ ಸೋಮ, ಭರತ್, ಅಮಿತ್, ಗುಂಡ ಹಾಗೂ ಯತೀಶ್ ಅವರು ವಿಧಾನಪರಿಷತ್ ಸದಸ್ಯ ರಾಜೇಂದ್ರ ಕೊಲೆಗೆ 70 ಲಕ್ಷಕ್ಕೆ ಡೀಲ್ ಕುದುರಿಸಿದ್ದು, ಮುಂಗಡ 5 ಲಕ್ಷ ರೂಪಾಯಿ  ಪಡೆದಿದ್ದರು ಎನ್ನಲಾಗಿದೆ.

- Advertisement -
Ad image

Share this Article